ಒಂದೇ ದಿನದ ಮಳೆಗೆ ಕೆರೆಯಾದ ಭಾರತದ ಸಿಲಿಕಾನ್ ವ್ಯಾಲಿ: ಹೆಚ್.ಡಿ.ಕುಮಾರಸ್ವಾಮಿ ಕಿಡಿ

BANGALURU:

Font size:

ಹೂಡಿಕೆದಾರ ಸ್ವರ್ಗ ಕಣ್ಣೀರು ಹಾಕುತ್ತಿದೆ ಎಂದು ಆಕ್ರೋಶ

ಬೆಂಗಳೂರು: ಒಂದೇ ದಿನದ ಮಳೆಗೆ ಭಾರತದ ಸಿಲಿಕಾನ್ ವ್ಯಾಲಿ ಕೆರೆಯಂತೆ ಆಗಿದ್ದು, ಇಂಥ ದುಸ್ಥಿತಿಗೆ ರಾಜ್ಯ ಕಾಂಗ್ರೆಸ್ ಸರಕಾರದ ಕೆಟ್ಟ ನೀತಿಗಳೇ ಕಾರಣ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಬೆಂಗಳೂರಿನಲ್ಲಿ ಒಂದೇ ದಿನದ ವರುಣನ ಅಬ್ಬರಕ್ಕೆ ಭಾರತದ ಸಿಲಿಕಾನ್ ವ್ಯಾಲಿಯ ಮೂಲಸೌಕರ್ಯ ವ್ಯವಸ್ಥೆ ತತ್ತರಿಸಿ ಹೋಗಿದೆ. ರಾಜ್ಯ ಕಾಂಗ್ರೆಸ್ ಸರಕಾರದ ದುರಾಡಳಿತ ಮತ್ತು ಅಸಮರ್ಪಕ ನಿರ್ವಹಣೆಯಿಂದ ಭಾರತದ ಐಟಿ ಕಾರಿಡಾರ್'ನಲ್ಲಿ ಪ್ರವಾಹಸದೃಶ ಪರಿಸ್ಥಿತಿ ತಲೆದೋರಿದೆ ಎಂದು ಅವರು ದೂರಿದ್ದಾರೆ.

ಒಳಚರಂಡಿ ವ್ಯವಸ್ಥೆ ಹದಗೆಟ್ಟು ರಸ್ತೆಗಳು ನದಿಗಳಾಗಿವೆ. ಸರಕಾರದ ಘೋರ ವೈಫಲ್ಯದಿಂದ ಬೆಂಗಳೂರಿನ ಜನರು ಮಳೆಗೆ ಸಿಕ್ಕಿ ನರಕಯಾತನೆ ಅನುಭವಿಸುತ್ತಿದ್ದಾರೆ. ಆಡಳಿತ ವ್ಯವಸ್ಥೆಯ ಕೆಟ್ಟ ನೀತಿಗಳು ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರವನ್ನು ಹಾಳುಗೆಡವಿದೆ ಎಂದು ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಹೂಡಿಕೆದಾರ ಸ್ವರ್ಗವಾಗಿದ್ದ ಬೆಂಗಳೂರು, ಜಾಗತಿಕ ಮಟ್ಟದ ತಂತ್ರಜ್ಞಾನದ ನೆಚ್ಚಿನ ನೆಲೆವೀಡಾಗಿದ್ದ ಬೆಂಗಳೂರು ಈಗ ಇನ್ನಿಲ್ಲದ ದುಸ್ಥಿತಿಗೆ ಸಿಲುಕಿ ಕಣ್ಣೀರು ಹಾಕುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Prev Post ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ, ಮೂರೂ ಕ್ಷೇತ್ರ ಗೆಲ್ಲುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್
Next Post ಅನಿರೀಕ್ಷಿತ ಮಳೆ; ಬಿಬಿಎಂಪಿ ನಿಯಂತ್ರಣ ಕೊಠಡಿ, ಅಧಿಕಾರಿಗಳು 24 ಗಂಟೆ ಕಾರ್ಯೋನ್ಮುಖರಾಗಿರಬೇಕು : ಡಿಸಿಎಂ ಡಿ.ಕೆ. ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ