ಪೀಣ್ಯ ಪ್ಲಾಂಟೇಷನ್ ನಲ್ಲಿ ಸಿನಿಮಾ ಸೆಟ್‌ ಮರ ಕಡಿದಿರುವ ಆರೋಪ ;ಕ್ರಮ ತೆಗೆದುಕೊಳ್ಳಲು ಸೂಚಿಸಿರುವ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ

BANGALURU:

Font size:

ಪೀಣ್ಯ ಪ್ಲಾಂಟೇಷನ್ ನಲ್ಲಿ ಸಿನಿಮಾ ಸೆಟ್‌ ಮರ ಕಡಿದಿರುವ ಆರೋಪ ;ಕ್ರಮ ತೆಗೆದುಕೊಳ್ಳಲು ಸೂಚಿಸಿರುವ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ;ಸ್ಥಳಕ್ಕೆ ಭೇಡಿ ನೀಡಿ ಪರಿಶೀಲನೆ

ಬೆಂಗಳೂರು ನಗರದ ಪೀಣ್ಯ ಪ್ಲಾಂಟೇಷನ್ ನಲ್ಲಿ ಸಿನಿಮಾ ಸೆಟ್‌ ಹಾಕಲು ಮರಗಳನ್ನು ಕಡಿದಿರುವ ಆರೋಪದ ಹಿನ್ನೆಲೆಯಲ್ಲಿ ಚಿತ್ರ ನಟ ಯಶ್ ವಿರುದ್ಧ FIR ದಾಖಲಿಸಲು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಟಾಕ್ಸಿಕ್ ಸಿನಿಮಾ ಚಿತ್ರೀಕರಣಕ್ಕೆ ಅರಣ್ಯ ಪ್ರದೇಶ ಬಳಕೆ ಮಾಡಲಾಗಿದ್ದು, ಸೆಟ್ ಹಾಕಲು ಮರಗಳನ್ನು ಕಡಿದಿರುವರೆಂದು ಆರೋಪಿಸಲಾಗಿದೆ.

ಇಲ್ಲಿ ಮರ ಗಿಡಗಳನ್ನು ಕಡಿದಿರುವುದು ಉಪಗ್ರಹ ಚಿತ್ರದಿಂದ ಸ್ಪಷ್ಟವಾಗಿ ಕಾಣುತ್ತದೆ,
ಎಚ್.ಎಂ.ಟಿ. ತನ್ನ ವಶದಲ್ಲಿರುವ ಅರಣ್ಯ ಭೂಮಿನ್ನು ಸಿನಿಮಾ ಚಿತ್ರೀಕರಣಕ್ಕೆ ಮತ್ತು ಖಾಲಿ ಜಾಗವನ್ನು ದಿನದ ಆಧಾರದ ಮೇಲೆ ಬಾಡಿಗೆಗೆ ನೀಡಲಾಗಿದೆ.

ಕೆನರಾ ಬ್ಯಾಂಕ್ ಗೆ ಎಚ್.ಎಂ.ಟಿ. ಮಾರಾಟ ಮಾಡಿದ ಎನ್ನಲಾದ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಹೆಸರಿನ ಚಲನಚಿತ್ರಕ್ಕಾಗಿ ಈಗಾಗಲೆ ಚಿತ್ರೀಕರಣ ನಡೆಯುತ್ತಿದೆ,ಇದಕ್ಕಾಗಿ ಇಲ್ಲಿದ್ದ ನೂರಾರು ಮರಗಳನ್ನು ಕಡಿಯಲಾಗಿದೆ.

ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದಿಂದ ಹಿಂದಿನ ಮತ್ತು ಇಂದಿನ ಉಪಗ್ರಹ ಚಿತ್ರಗಳನ್ನು ಪಡೆದು, ಎಷ್ಟು ಮರ ಕಡಿಯಲಾಗಿದೆ? ಇದಕ್ಕೆ ನಿಯಮಾನುಸಾರ ಅನುಮತಿ ಪಡೆಯಲಾಗಿದೆಯೇ ಅನುಮತಿ ಕೊಟ್ಟಿದ್ದರೆ ಅರಣ್ಯ ಭೂಮಿಯಲ್ಲಿ ಮರ ಕಡಿಯಲು ಅನುಮತಿ ನೀಡಿದ ಅಧಿಕಾರಿಯ ವಿರುದ್ಧ ಶಿಸ್ತು ಕ್ರಮ ಜರುಗಿಸಲು, ಅನುಮತಿ ಇಲ್ಲದೆ ಮರ ಕಡಿದಿದ್ದಲ್ಲಿ ಅದಕ್ಕೆ ಕಾರಣರಾದ ಎಲ್ಲರ ವಿರುದ್ಧ ಅರಣ್ಯ ಅಪರಾಧ ಪ್ರಕರಣ ದಾಖಲಿಸಲು ಸಚಿವರು ಸೂಚಿಸಿದ್ದಾರೆ.

ಬೆಂಗಳೂರು ಪೀಣ್ಯ ಪ್ಲಾಂಟೇಷನ್ 1 ಮತ್ತು 2ರಲ್ಲಿ ಒಟ್ಟು 599 ಎಕರ ಮೀಸಲು ಅರಣ್ಯ ಎಂದು ಗೆಜೆಟ್ ಅಧಿಸೂಚನೆ ಆಗಿದ್ದು, ಇದನ್ನು 1960ರ ದಶಕದಲ್ಲಿ ಡಿನೋಟಿಫಿಕೇಷನ್ ಮಾಡದೆ ಕಾನೂನು ಬಾಹಿರವಾಗಿ ಎಚ್.ಎಂ.ಟಿ. ಸಂಸ್ಥೆಗೆ ದಾನ, ಮಂಜೂರು ಹೆಸರಲ್ಲಿ ಹಸ್ತಾಂತರಿಸಲಾಗಿದೆ.

ತನ್ನ ಸ್ವಾಧೀನದಲ್ಲಿರುವ ಅರಣ್ಯ ಭೂಮಿಯನ್ನು ಎಚ್.ಎಂ.ಟಿ. ವಿವಿಧ ಸರ್ಕಾರಿ ಮತ್ತು ಖಾಸಗಿ
ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳಿಗೆ ಅಕ್ರಮವಾಗಿ ಮಾರಾಟ ಮಾಡಿದ್ದು, ಇಲ್ಲಿ ಅರಣ್ಯೇತರ ಚಟುವಟಿಕೆಗಳು ನಡೆಯುತ್ತಿರುತ್ತವೆ. ಈ ಅರಣ್ಯ ಪ್ರದೇಶದಲ್ಲಿ ಮರಗಿಡಗಳನ್ನು ಕಡಿದಿರುವುದು ಉಪಗ್ರಹ ಚಿತ್ರಗಳಲ್ಲಿ ಗೋಚರಿಸುತ್ತಿರುವುದಕ್ಕೆ ಸಚಿವರು ಗಮನಿಸಿದ್ದಾರೆ.

ಸ್ಥಳಕ್ಕೆ ಸಚಿವ ಖಂಡ್ರೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಅರಣ್ಯ ಅಪರಾಧ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದಾರೆ.

Prev Post ಕೇಂದ್ರದ ಅಧಿಕಾರಿಗಳನ್ನು ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Next Post ಹಾಸನದ ಶ್ರೀ ಹಾಸನಾಂಬಾ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ ಯಡಿಯೂರಪ್ಪ