ವಿಧಾನಪರಿಷತ್ತಿನ ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣ ವಚನ ಸ್ವೀಕಾರ

BANGALORE:

Font size:

ವಿಧಾನಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನಪರಿಷತ್‍ನ ನೂತನ ಸದಸ್ಯರಾಗಿ ಭಗವಂತ ಹಾಗೂ ತಾಯಿ ಭಾರತಾಂಬೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಬೆಂಗಳೂರು, ಅ. 30 -

ವಿಧಾನಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನಪರಿಷತ್‍ನ ನೂತನ ಸದಸ್ಯರಾಗಿ ಭಗವಂತ ಹಾಗೂ ತಾಯಿ ಭಾರತಾಂಬೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ವಿಧಾನಪರಿಷತ್ತಿನ ಮಾನ್ಯ ಸಭಾಪತಿಗಳಾದ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ವಿಧಾನಪರಿಷತ್‍ನ ಕಾರ್ಯದರ್ಶಿಗಳಾದ ಕೆ.ಆರ್.ಮಹಾಲಕ್ಷ್ಮಿ ಸೇರಿದಂತೆ ಶಾಸಕರು, ವಿಧಾನಪರಿಷತ್‍ನ ಸದಸ್ಯರು ಉಪಸ್ಥಿತರಿದ್ದರು.

Prev Post ಜಮೀರ್ ಅಹ್ಮದ್ ರನ್ನ ಕಿತ್ತೊಗೆಯಲಿ ಕಾಂಗ್ರೆಸ್ಈ ರಾಜ್ಯ- ದೇಶವನ್ನು ಇಸ್ಲಾಮೀಕರಣ ಮಾಡುತ್ತಿದ್ದಾರೆ ಜಮೀರ್ ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ
Next Post ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ