ಎಸ್.ಎಂ.ಕೃಷ್ಣ ವಿಧಿವಶ

BANGALURU:

Font size:

ಎಸ್.ಎಂ.ಕೃಷ್ಣ ವಿಧಿವಶ ರಾಜ್ಯದ ಮಾಜಿ ಮುಖ್ಯಮಂತ್ರಿ ಮುಖ್ಯಮಂತ್ರಿ ಎಸ್.‌ ಎಂ. ಕೃಷ್ಣವಿಧಿವಶರಾಗಿದ್ದಾರೆ. ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಆಸ್ಪತ್ರೆಗೂ ದಾಖಲಾಗಿದ್ದರು. ಸದಾಶಿವನಗರದ ಅವರ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ 2.30 ರ ಹೊತ್ತಿಗೆ ವಿಧಿವಶರಾದರು.

ರಾಜ್ಯದ ಮಾಜಿ ಮುಖ್ಯಮಂತ್ರಿ ಮುಖ್ಯಮಂತ್ರಿ ಎಸ್.‌ ಎಂ. ಕೃಷ್ಣವಿಧಿವಶರಾಗಿದ್ದಾರೆ.
ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಆಸ್ಪತ್ರೆಗೂ ದಾಖಲಾಗಿದ್ದರು. ಸದಾಶಿವನಗರದ ಅವರ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ 2.30 ರ ಹೊತ್ತಿಗೆ ವಿಧಿವಶರಾದರು.

ಎಸ್ ಎಮ್ ಕೃಷ್ಣ (ಸೋಮನಹಳ್ಳಿ ಮಲ್ಲಯ್ಯ ಕೃಷ್ಣ) (ಜನನ-೧೯೩೨) ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. ೧೯೯೯ ರಿಂದ ೨೦೦೪ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ ೨೦೧೭ ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು. ಅವರು ೧೯೯೯ ರಿಂದ ೨೦೦೪ ರವರೆಗೆ ಕರ್ನಾಟಕದ ೧೬ ನೇ ಮುಖ್ಯಮಂತ್ರಿಯಾಗಿದ್ದರು ಮತ್ತು ೨೦೦೪ ರಿಂದ ೨೦೦೮ ರವರೆಗೆ ಮಹಾರಾಷ್ಟ್ರದ ೧೯ ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ ೧೯೮೯ ರಿಂದ ಜನವರಿ ೧೯೯೩ ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. ೧೯೭೧ ರಿಂದ ೨೦೧೪ ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ ೨೦೨೩ರ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿತ್ತು.

ವಿದ್ಯಾಭ್ಯಾಸ
ಎಸ್ ಎಂ ಕೃಷ್ಣ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಪದವೀಧರರಾದ ನಂತರ ಬೆಂಗಳೂರಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಓದಿದರು. ಇದರ ನಂತರ ಅಮೆರಿಕದ ಟೆಕ್ಸಸ್ ರಾಜ್ಯದಲ್ಲಿರುವ ಸದರ್ನ್ ಮೆಥಡಿಸ್ಟ್ ವಿಶ್ವವಿದ್ಯಾಲಯದಲ್ಲಿ ಓದಿ ನಂತರ ವಾಷಿಂಗ್ಟನ್ ನಲ್ಲಿರುವ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದಲ್ಲಿ ಪ್ರತಿಷ್ಠಿತ ಫುಲ್‍ಬ್ರೈಟ್ ವಿದ್ಯಾರ್ಥಿವೇತನವನ್ನು ಪಡೆದರು.

ರಾಜಕೀಯ ಜೀವನ
ಭಾರತಕ್ಕೆ ಮರಳಿದ ನಂತರ ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಸ್ವಲ್ಪ ಕಾಲ ಅಂತಾರಾಷ್ಟ್ರೀಯ ನ್ಯಾಯದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು. ವಿಧಾನ ಸಭೆಗೆ ಮೊದಲ ಬಾರಿ ೧೯೬೨ ರಲ್ಲಿ ಚುನಾಯಿತರಾದರು. ೧೯೬೮ರಲ್ಲಿ ಲೋಕಸಭೆಗೆ ಚುನಾಯಿತರಾದರು. ೧೯೭೧ರಲ್ಲಿ ಅಲ್ಲಿಗೆ ಮರು ಚುನಾಯಿತರಾಗಿ ಮತ್ತೆ ೧೯೭೨ ರಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾಯಿತರಾದರು. ಇದೇ ಸಮಯದಲ್ಲಿ ವಾಣಿಜ್ಯ, ಉದ್ಯಮ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದರು. ೧೯೮೩ರಲ್ಲು ಉದ್ಯಮ ಖಾತೆ ಮತ್ತು ೧೯೮೪ ರಲ್ಲಿ ವಿತ್ತ ಖಾತೆಯ ಸಚಿವರಾದರು. ೧೯೮೯ ರಿಂದ ೧೯೯೨ರ ವರೆಗೆ ವಿಧಾನಸಭೆಯ ಸ್ಪೀಕರ್ ಆಗಿ ನೇಮಿತರಾದರು. ೧೯೯೨ ರಿಂದ ೧೯೯೪ರ ವರೆಗೆ ಕರ್ನಾಟಕದ ಉಪ-ಮುಖ್ಯಮಂತ್ರಿಗಳಾದರು. ೧೯೯೬ರಲ್ಲಿ ರಾಜ್ಯಸಭೆಗೆ ನೇಮಕಗೊಂಡ ಕೃಷ್ಣ, ೧೯೯೯ ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ೧೯೯೯ರಿಂದಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾಗಿದ್ದರು. ವಿದೇಶಗಳಲ್ಲಿ ಎರಡು ಬಾರಿ (ವಿಶ್ವಸಂಸ್ಥೆಯಲ್ಲಿ ಒಮ್ಮೆ, ಮತ್ತು ಕಾಮನ್ ವೆಲ್ತ್ ಒಕ್ಕೂಟದಲ್ಲಿ ಒಮ್ಮೆ) ಭಾರತವನ್ನು ಪ್ರತಿನಿಧಿಸಿದ್ದರು.

೧೯೯೯ ರಿಂದ ೨೦೦೪ ರವರೆಗೆ ಕರ್ನಾಟಕ ರಾಜ್ಯದ ೧೬ನೇ ಮುಖ್ಯಮಂತ್ರಿಗಳಾಗಿದ್ದರು.
೨೦೦೪ ರಿಂದ ೨೦೦೮ರ ವರೆಗೆ ಮಹಾರಾಷ್ಟ್ರದ ೧೯ನೇ ರಾಜ್ಯಪಾಲರಾಗಿದ್ದರು.
ಕೇಂದ್ರ ವಿದೇಶಾಂಗ ಸಚಿವರಾಗಿದ್ದರು.

ಮಾರ್ಚ್ ೨೦೧೭ ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವ ಪಡೆದರು.
ದಶಂಬರ ೧೯೮೯ ರಿಂದ ಜನವರಿ ೧೯೯೩ರ ವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.
೧೯೭೧ ರಿಂದ ೨೦೧೪ರ ವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು.

ಪ್ರಶಸ್ತಿ

೨೦೨೩ರ ಸಾಲಿನ ಪದ್ಮವಿಭೂಷಣ ಪ್ರಶಸ್ತಿ

ಎಸ್.ಎಂ.ಕೃಷ್ಣ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ
ಜನವರಿ ೨೮ ೨೦೧೭ಬೆಳಿಗ್ಗೆ ೧೧ ಗಂಟೆಗೆ ಎಸ್.ಎಂ.ಕೃಷ್ಣ ಅಧಿಕೃತವಾಗಿ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಣೆ ಮಾಡಿದರು. ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ತುರ್ತು ಪತ್ರಿಕಾ ಗೋಷ್ಠಿ ನಡೆಸಿ ‘ ಕಾಂಗ್ರೆಸ್ ಪಕ್ಷವನ್ನು ತ್ಯಜಿಸುತ್ತಿದ್ದೇನೆ’ ಎಂದು ಎಸ್‌. ಎಂ. ಕೃಷ್ಣ ಅಧಿಕೃತವಾಗಿ ಘೋಷಣೆ ಮಾಡಿದರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಸ್.ಎಂ.ಕೃಷ್ಣ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದರು.

ವಿಧಿವಶ

ತಮ್ಮ ೯೨ನೇ ವರ್ಷ ವಯಸ್ಸಿನಲ್ಲಿ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ೨.೪೫ರ ಸಮಯದಲ್ಲಿ ಹೃದಯಾಘಾತದಿಂದ ನಿಧನರಾದರು. ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Prev Post ಬೆಳಗಾವಿಯಲ್ಲಿ ಸೋಮವಾರ ನಡೆದ ಕರ್ನಾಟಕ ಸಂಸ್ಥಾನ ಜೈನ ಸಮಾವೇಶದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್
Next Post ಎಸ್.ಎಂ ಕೃಷ್ಣ ಅವರು ನನಗೆ ತಂದೆ ಸಮಾನರು: ಡಿಸಿಎಂ ಡಿ.ಕೆ. ಶಿವಕುಮಾರ್