ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕರಾದ ಚಂದ್ರಶೇಖರ ಪಾಲತ್ತಾಡಿಯವರಿಗೆ ಸನ್ಮಾನ
ಬೆಂಗಳೂರು,ಅ.3-ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಕ್ಲಬ್ ಆ್ ಬೆಂಗಳೂರು ಇವರ ಸಂಯುಕ್ತಾಶ್ರದಲ್ಲಿ ಟಿಎಸ್ಆರ್ ಪತ್ರಿಕೋದ್ಯಮ ಭಾಜನರಾಗಿರುವ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕರಾದ ಚಂದ್ರಶೇಖರ ಪಾಲತ್ತಾಡಿ ಹಾಗೂ ಇತರ ಪ್ರಶಸ್ತಿ ಪಡೆದವರನ್ನು ಸನ್ಮಾನಿಸಲಾಯಿತು.
ಟಿಎಸ್ಆರ್ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿವಾಜಿ ಎಸ್. ಗಣೇಶನ್, ಶ್ರೀಕಾಂತಾಚಾರ್ಯ.ಆರ್.ಮಣೂರ, ಡಾ.ಆರ್.ಪೂರ್ಣಿಮಾ, ಪದ್ಮರಾಜ ದಂಡಾವತಿ, ಡಾ.ಸರಜೂ ಕಾಟ್ಕರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿರುವ ರಾಜೀವ್ ಕಿದಿಯೂರ, ಇಂದೂಧರ ಹೊನ್ನಾಪುರ, ಎನ್.ಮಂಜುನಾಥ, ಶಿವಲಿಂಗಪ್ಪ ದೊಡ್ಡಮನಿ ಅವರನ್ನುಇದೇ ಸಂದರ್ಭದಲ್ಲಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಇಇಸ್ರೋ ಮಾಜಿ ಅಧ್ಯಕರಾದ ಕಿರಣ ಕುಮಾರ್ , ವಿಶ್ವವಾಣಿ ಸಂಪಾದಕರಾದ ವಿಶ್ವೇಶ್ವರ ಭಟ್, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಬೆಳ್ಳಿತಟ್ಟೆ ಅವರು ಭಾಗವಹಿಸದ್ದರು.






