ಜಾಗತಿಕ ಹೂಡಿಕೆದಾರರ ಸಮಾವೇಶ: ಸಿದ್ಧತೆ ಪರಿಶೀಲನೆ

BANGALURU:

Font size:

ಜಾಗತಿಕ ಹೂಡಿಕೆದಾರರ ಸಮಾವೇಶ: ಸಿದ್ಧತೆ ಪರಿಶೀಲನೆ

ಬೆಂಗಳೂರು: ಫೆ.11ರಿಂದ 14ರವರೆಗೆ ಇಲ್ಲಿನ ಅರಮನೆ ಮೈದಾನದಲ್ಲಿ ಜರುಗುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ನಡೆಯುತ್ತಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಶನಿವಾರ ಇಲ್ಲಿ ಸಮಗ್ರವಾಗಿ ಪರಿಶೀಲಿಸಿದರು.

ಉನ್ನತ ಮಟ್ಟದ ಅಧಿಕಾರಿಗಳ ಜತೆ ಉದ್ಯೋಗ ಮಿತ್ರ ಕಚೇರಿಯಲ್ಲಿ ಸಮಾಲೋಚಿಸಿದ ಅವರು ಸೂಕ್ತ ಸಲಹೆಗಳನ್ನು ನೀಡಿ, ಮುಂದಿನ ವಾರ ಮತ್ತೊಂದು ಸುತ್ತಿನ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶವು ಫೆ.11ರ ಸಂಜೆಯೇ ಉದ್ಘಾಟನೆ ಆಗಲಿದೆ. ಈ ಸಮಾವೇಶವು ಅಭೂತಪೂರ್ವ ರೀತಿಯಲ್ಲಿ ಯಶಸ್ಸು ಗಳಿಸುವ ಸಂಬಂಧ ಪ್ರತಿಯೊಬ್ಬರೂ ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಸಮಾವೇಶದಲ್ಲಿ ಯಾವ್ಯಾವ ಗೋಷ್ಠಿಗಳಲ್ಲಿ ಯಾರಾರು ಮಾತನಾಡಬೇಕು ಎನ್ನುವುದನ್ನು ಆಖೈರು ಮಾಡಲಾಗುತ್ತಿದೆ. ಜತೆಗೆ ಅತಿಥಿಗಳಿಗೆ ಕರ್ನಾಟಕದ ಅಸ್ಮಿತೆ ಸಾರುವಂತಹ ರೇಷ್ಮೆ ಸ್ಕಾರ್ಫ್, ಮೈಸೂರು ಸ್ಯಾಂಡಲ್ ಸೋಪ್ ಮುಂತಾದ ವಿಶಿಷ್ಟ ವಸ್ತುಗಳನ್ನು ಉಡುಗೊರೆಯಾಗಿ ನೀಡುವ ಬಗ್ಗೆಯೂ ಚರ್ಚೆಯಾಯಿತು.

ಫೆ. 12, 13 ಮತ್ತು 14ರಂದು ಮೂರು ದಿನಗಳ ಕಾಲ ಪೂರ್ಣ ಪ್ರಮಾಣದಲ್ಲಿ ಹಲವು ವಿಚಾರಗಳ ಕುರಿತು ಗೋಷ್ಢಿಗಳು ಮತ್ತು ಹೂಡಿಕೆ ಒಡಂಬಡಿಕೆಗಳು ನಡೆಯಲಿವೆ. ಪ್ರತಿಯೊಂದು ವಿಭಾಗಕ್ಕೂ ಸೂಕ್ತ ಆದ್ಯತೆ ಇರುವಂತೆ ನೋಡಿಕೊಳ್ಳಲಾಗುವುದು ಎಂದು ಪಾಟೀಲ ಹೇಳಿದ್ದಾರೆ.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.

Prev Post ಜೆಡಿಎಸ್ ಗೆ ಪುಟಿದೇಳುವ, ಫೀನಿಕ್ಸ್ ಪಕ್ಷಿಯಂತೆ ಮೇಲೆದ್ದು ಬರುವ ಶಕ್ತಿ ಇದೆ
Next Post ಇಡಿ ಅಧಿಕಾರಿಗಳೆಂದು ಸುಲೈಮಾನ್ ಹಾಜಿ ಮನೆಯ ಮೇಲೆ ದಾಳಿ, ಹಣ ಲೂಟಿ ಪ್ರಕರಣ: ಆರೋಪಿಗಳ ಪತ್ತೆಗೆ ಸಭಾಧ್ಯಕ್ಷ ಯು.ಟಿ. ಖಾದರ್ ಸೂಚನೆ