PRABHAVAA.COM

ಬಿಡದಿ ಯೋಜನೆ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ: ಸಿಎಂಗೆ ನೇರ ಸವಾಲ್, ರೈತರ ಹಿತಾಸಕ್ತಿ ಕಡೆಗಣನೆ ಆರೋಪ

Ramanagara:

Font size:

ಬಿಡದಿ ಪಾದಯಾತ್ರೆ ನಡುವೆ ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಸವಾಲು

ದೇವನಹಳ್ಳಿಯಲ್ಲಿ ಡಿನೋಟಿಫಿಕೇಷನ್ ಮಾಡಿದ ಸಿದ್ದರಾಮಯ್ಯ ಜೈಲಿಗೆ ಹೋದ್ರಾ?"

ಬಿಡದಿ ಪಾದಯಾತ್ರೆ ನಡುವೆ ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಸವಾಲು

"ರಿಯಲ್ ಎಸ್ಟೇಟ್ ಕಂಪನಿಯ ಜೊತೆ ಕಮಿಷನ್ ಪಡೆಯಲು ಯೋಜನೆ ಮಾಡುತ್ತಿದ್ದೀರಾ?"

ರಾಮನಗರ: "ಮಾತೆತ್ತಿದರೆ ಕುಮಾರಣ್ಣ ಕಾಲದಲ್ಲಿ ರೆಡ್ ಜೋನ್ ಆಯ್ತು ಅಂತಾರೆ. ಡಿನೋಟಿಫಿಕೇಷನ್ ಮಾಡಿ ನಾನು ಜೈಲಿಗೆ ಹೋಗಲ್ಲ ಅಂತ ಸಿಎಂ ಹೇಳುತ್ತಾರೆ. ಆದರೆ ದೇವನಹಳ್ಳಿಯಲ್ಲಿ ನಿಮ್ಮ ಸರ್ಕಾರದ ಸಿಎಂ ಸಿದ್ದರಾಮಯ್ಯ ಡಿನೋಟಿಫಿಕೇಷನ್ ಮಾಡಿದರಲ್ಲವಾ? ಅವರು ಜೈಲಿಗೆ ಹೋದ್ರಾ?" ಎಂದು ನಿಖಿಲ್ ಕುಮಾರಸ್ವಾಮಿ ಸಿಎಂ ವಿರುದ್ಧ ಕಿಡಿಕಾರಿದರು.

"ಈಗ ನೀವು ಡಿನೋಟಿಫಿಕೇಷನ್ ಮಾಡಿದರೆ ಮಾತ್ರ ಜೈಲಿಗೆ ಹೋಗ್ತೀರಾ?" ಎಂದು ಮುಖ್ಯಮಂತ್ರಿಗೆ ನಿಖಿಲ್ ಕುಮಾರಸ್ವಾಮಿ ನೇರ ಸವಾಲು ಹಾಕಿದರು.

"ಈ ಯೋಜನೆಯನ್ನು ಸರ್ಕಾರ ಪ್ರತಿಷ್ಠೆಗೆ ತೆಗೆದುಕೊಂಡು ಮಾಡುತ್ತಿದೆ. ಇದರಲ್ಲಿ ಸಾರ್ವಜನಿಕರ ಹಿತಾಸಕ್ತಿ ಇಲ್ಲ. ರೈತರ ಅನುಮತಿ ಪಡೆಯದೇ ಯೋಜನೆ ಮಾಡಲು ಮುಂದಾಗಿದ್ದಾರೆ" ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

"ಇಲ್ಲಿನ ಶೇ 81 ರಷ್ಟು ಸಣ್ಣ ರೈತರಿಗೆ ಇದರಿಂದ ತೊಂದರೆಯಾಗಲಿದೆ. ಇಲ್ಲಿಯ ರೈತರು ತಿಂಗಳಿಗೆ 6 ಲಕ್ಷ ಲೀಟರ್ ಹಾಲು ಉತ್ಪಾದನೆ ಮಾಡುತ್ತಿದ್ದಾರೆ. ಸರ್ಕಾರ ಏಕಾಏಕಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ಯಾವ ಕಾರಣಕ್ಕೆ?" ಎಂದು ನಿಖಿಲ್ ಪ್ರಶ್ನಿಸಿದರು.

"ಸಾಲ ತೆಗೆದುಕೊಂಡು ಪ್ರಾಜೆಕ್ಟ್ ಮಾಡುವುದು ಯಾರ ಉದ್ಧಾರಕ್ಕೆ? ರಿಯಲ್ ಎಸ್ಟೇಟ್ ಕಂಪನಿಯ ಜೊತೆ ಕಮಿಷನ್ ಪಡೆಯಲು ಯೋಜನೆ ಮಾಡುತ್ತಿದ್ದೀರಾ? ಏನೇ ಯೋಜನೆ ಮಾಡಿದರೂ ಸಿಎಂ 30 ಸಾವಿರ ಕೋಟಿ ವೆಚ್ಚದ್ದೇ ಮಾಡುತ್ತಾರೆ. ಸುರಂಗ ರಸ್ತೆ, ಕಸದ ಟೆಂಡರ್ ಎಲ್ಲಾ 30 ಸಾವಿರ ಕೋಟಿ ಯೋಜನೆಗಳು. ಅದಕ್ಕಿಂತ ಕಮ್ಮಿ ನಮ್ಮ ಸಿಎಂ ಮುಟ್ಟೋದೆ ಇಲ್ಲ" ಎಂದು ನಿಖಿಲ್ ವ್ಯಂಗ್ಯವಾಡಿದರು.

"ಇಂದಿನ ಹೋರಾಟ ಕೇವಲ ಆರಂಭ. ಮುಂದೆ ಎಂತಹ ಸಂದರ್ಭದಲ್ಲೂ ರೈತರ ಜೊತೆ ಇರುತ್ತೇವೆ. ಅಂತಹ ಸಂದರ್ಭ ಬಂದರೆ ರೈತರ ಜೊತೆ ವಿಧಾನಸೌಧ ಚಲೋ ಮಾಡಲು ಸಿದ್ಧ. ಇದು ದಪ್ಪ ಚರ್ಮದ ಸರ್ಕಾರ. ಇದರ ವಿರುದ್ಧ ಕಾನೂನು ಹೋರಾಟಕ್ಕೂ ಸಿದ್ಧರಿದ್ದೇವೆ" ಎಂದು ಎಚ್ಚರಿಕೆ ನೀಡಿದರು.

Comments

Leave a Comment

Prev Post ಪಂಚಾಯ್ತಿ, ವಾರ್ಡ್ ಮಟ್ಟದ ಗ್ಯಾರಂಟಿ ಸಮಿತಿಗಳ ರಚನೆ: ಸಿಎಂ ಡಿ.ಕೆ. ಶಿವಕುಮಾರ್

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News