ಯಶವಂತಪುರದಲ್ಲಿ ಟೆಕ್ಸ್‌ಟೈಲ್‌ ಮಾರ್ಕೆಟ್‌: ಮುಖ್ಯಮಂತ್ರಿಗಳೊಂದಿಗೆ ಜೊತೆ ಚರ್ಚಿಸಿ ಶೀಘ್ರ ಶಂಕುಸ್ಥಾಪನೆ: ಜವಳಿ ಸಚಿವ ಶಿವಾನಂದ ಪಾಟೀಲ ಭರವಸೆ

Bengaluru Urban:

Font size:

ಯಶವಂತಪುರದಲ್ಲಿ ಟೆಕ್ಸ್‌ಟೈಲ್‌ ಮಾರ್ಕೆಟ್‌: ಮುಖ್ಯಮಂತ್ರಿಗಳೊಂದಿಗೆ ಜೊತೆ ಚರ್ಚಿಸಿ ಶೀಘ್ರ ಶಂಕುಸ್ಥಾಪನೆ: ಜವಳಿ ಸಚಿವ ಶಿವಾನಂದ ಪಾಟೀಲ ಭರವಸೆ

ಬೆಂಗಳೂರು: ಪಾರಂಪರಿಕ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಉತ್ಪನ್ನಗಳಿಗೆ ನಮ್ಮಲ್ಲೇ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಯಶವಂತಪುರದಲ್ಲಿರುವ ಇಲಾಖೆಯ ಒಂದೂವರೆ ಎಕರೆ ಪ್ರದೇಶದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ,ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ರಾಜಾಜಿನಗರದ ಡಾ. ಬಿ.ಆರ್‌. ಅಂಬೇಡ್ಕರ್‌ ಸ್ಟೇಡಿಯಂನಲ್ಲಿ 14 ದಿನಗಳ ಭಾರತೀಯ ಕೈಮಗ್ಗ ಪರಂಪರೆ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಸಿಎಂ ಜೊತೆ ಚರ್ಚಿಸಿ ಶೀಘ್ರದಲ್ಲಿ ಶಂಕುಸ್ಥಾಪನೆ ನೆರವೇರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಪಾರಂಪರಿಕ ಕಲೆ ನಶಿಸಿ ಹೋಗುತ್ತಿದೆ. ಈ ಕಲೆಯನ್ನು ಉಳಿಸಿ ಬೆಳೆಸಲು ಉತ್ಪನ್ನಗಳಿಗೆ ಸ್ಥಳೀಯ ಮಾರುಕಟ್ಟೆ ಕಲ್ಪಿಸಬೇಕಾಗಿದೆ. ಯಶವಂತಪುರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಟ್ಟಡದಲ್ಲಿ ಕೈಮಗ್ಗ ಉತ್ಪನ್ನಗಳು, ಚನ್ನಪಟ್ಟಣದ ಗೊಂಬೆ, ಕುಂಬಾರಿಕೆ ಸೇರಿದಂತೆ ಎಲ್ಲ ರೀತಿಯ ಪಾರಂಪರಿಕ ಕಲೆಯ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲು ಯೋಜಿಸಲಾಗಿದೆ ಎಂದು ಹೇಳಿದರು.

ರಾಜ್ಯದ ಕೈಮಗ್ಗ ಉತ್ಪನ್ನಗಳು ಹೊರ ರಾಜ್ಯಗಳಲ್ಲಿ ಬೇರೆ ಬೇರೆ ಬ್ರಾಂಡ್‌ಗಳಲ್ಲಿ ಮಾರಾಟವಾಗುತ್ತಿವೆ. ನಮ್ಮದೇ ಉತ್ಪನ್ನಗಳು ಬೇರೆ ರಾಜ್ಯಗಳಿಂದ ಬೇರೆ ಬ್ರಾಂಡ್‌ಗಳ ರೂಪದಲ್ಲಿ ರಾಜ್ಯಕ್ಕೆ ಬರುತ್ತಿವೆ. ಸ್ಥಳೀಯವಾಗಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದರೆ ಈ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೈಮಗ್ಗ ಕೇವಲ ಉತ್ಪಾದನಾ ಕ್ಷೇತ್ರವಷ್ಟೇ ಅಲ್ಲ, ಅದು ಭಾರತದ ಸಾಂಸ್ಕೃತಿಕ ಗುರುತು. ಕೈಗಾರಿಕೆ ಮತ್ತು ಪರಂಪರೆಯನ್ನು ಪ್ರತಿಬಿಂಬಿಸುವ ಜೀವಂತ ಸಂಪ್ರದಾಯ ಎಂದು ಸಚಿವರು ಬಣ್ಣಿಸಿದರು.

ನಮ್ಮ ನೇಕಾರರು ಪೀಳಿಗೆಯಿಂದ ಪೀಳಿಗೆಗೆ ತಂತ್ರಜ್ಞಾನ ಹಾಗೂ ವಿನ್ಯಾಸವನ್ನು ಸಂರಕ್ಷಣೆ ಮಾಡಿಕೊಂಡು ಬಂದಿದ್ದು, ಅದರ ಫಲವಾಗಿ ಭಾರತೀಯ ಕೈಮಗ್ಗ ಉತ್ಪನ್ನಗಳು ವಿಶ್ವದಾದ್ಯತ ಪ್ರಶಂಸೆಗೆ ಪಾತ್ರವಾಗಿವೆ ಎಂದರು.

ಕಾವೇರಿ ಹ್ಯಾಂಡ್‌ ಲೂಮ್‌ ಅಧ್ಯಕ್ಷ ಬಿ.ಜೆ. ಗಣೇಶ್‌ ಅವರು ಕೈಮಗ್ಗ ಉತ್ಪನ್ನಗಳು ಸೇರಿ ಸಾಂಪ್ರದಾಯಿಕ ಕಲೆಯ ಎಲ್ಲ ಉತ್ಪನ್ನಗಳು ಒಂದೇ ಸೂರಿನಡಿ ಸಿಗುವಂತೆ ಮಾರುಕಟ್ಟೆ ಕಲ್ಪಿಸಬೇಕು ಎಂದು ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಮಾಡಿದರು.

ಜವಳಿ ಇಲಾಖೆ ಅಧಿಕಾರಿಗಳಾದ ಪ್ರಭಾ ಕರಣ್‌, ಪ್ರಕಾಶ್‌, ಯೋಗೇಶ್‌ ಉಪಸ್ಥಿತರಿದ್ದರು.

ಮೇಳದಲ್ಲಿ 80 ಮಳಿಗೆಗಳಿದ್ದು, ರಾಜ್ಯದ ಕೈಮಗ್ಗ ಉತ್ಪನ್ನಗಳೊಂದಿಗೆ ಕಾಶ್ಮೀರ, ಹರಿಯಾಣ, ರಾಜಸ್ಥಾನ ಹಾಗೂ ಇತರ ಹಲವು ರಾಜ್ಯಗಳ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಮಾಡಲಾಗಿದೆ.

• ಅಂತಿಮ ಹಂತದಲ್ಲಿ ಜವಳಿ ನೀತಿ
2026-30 ಅವಧಿಯ ನೂತನ ಜವಳಿ ನೀತಿ ಅಂತಿಮ ಹಂತಕ್ಕೆ ಬಂದಿದೆ. ಮೆಗಾ ಮತ್ತು ಮಿನಿ ಇಂಡಸ್ಟ್ರೀಸ್‌ಗಳನ್ನು ಒಂದೇ ಸೂರಿನ ಅಡಿಯಲ್ಲಿ ತರುವ ಪ್ರಯತ್ನ ನಡೆದಿದೆ ಎಂದು ಶಿವಾನಂದ ಪಾಟೀಲ ಹೇಳಿದರು.

ಕಲಬುರಗಿಯಲ್ಲಿ ನಿರ್ಮಾಣವಾಗುತ್ತಿರುವ ಪಿಎಂ ಮಿತ್ರ ನೂಲಿನಿಂದ ಬಟ್ಟೆ ಹಂತದವರೆಗೆ ಎಲ್ಲ ಚಟುವಟಿಕೆಗಳು ಪಾರ್ಕ್‌ನಲ್ಲಿ ಒಂದೇ ಸೂರಿನ ಅಡಿಯಲ್ಲಿ ಬರಲಿವೆ. ಈ ಯೋಜನೆ ಅನುಷ್ಠಾನವಾದರೆ ಕರ್ನಾಟಕದಲ್ಲಿ ಮೈಲಿಗಲ್ಲಾಗಲಿದೆ ಎಂದರು.

Comments

Leave a Comment

Prev Post ಪಾಕಿಸ್ತಾನ, ಬಾಂಗ್ಲಾ ಪ್ರಜೆಗಳು ಮತದಾರರ ಪಟ್ಟಿಗೆ ಸೇರಿದರೆ ದೇಶದ ಭದ್ರತೆಗೆ ಅಪಾಯ: ಆರ್.ಅಶೋಕ್
Next Post ಕಂಠೀರವ ಸ್ಟುಡಿಯೋಸ್ ಆವರಣದಲ್ಲಿ ಟಿ.ಎಸ್. ಕರಿಬಸಯ್ಯ ಪುತ್ಥಳಿ ಅನಾವಣಗೊಳಿಸಿ, ವಜ್ರಮಹೋತ್ಸವ ಆಚರಿಸಬೇಕು : ಕಲಾ ಕಂಠೀರವ ದಿ. ಟಿ.ಎಸ್. ಕರಿಬಸಯ್ಯ ಸೇವಾ ಟ್ರಸ್ಟ್ ಆಗ್ರಹ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News